25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

ಧರ್ಮಸ್ಥಳ : ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಅಮೃತ ಭಾವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯಿನಿಯಾದ ಶ್ರೀಮತಿ ಸುನಂದ ಉದ್ಘಾಟಿಸಿದರು.

ಶಾಂತಿವನ ಟ್ರಸ್ಟಿನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ/ ಶಶಿಕಾಂತ್ ಜೈನ್ ಇವರು ಸ್ಪರ್ಧೆಯ ಯೋಜನೆ ಉದ್ದೇಶ ರೂಪುರೇಶೆಯ ಬಗ್ಗೆ ಮಾತನಾಡಿದರು. ತಾಲೂಕು ಯೋಗ ಸಂಘಟಕರಾದ ಶ್ರೀಮತಿ ಮಮತಾ ಮೂಡಿತ್ತಾಯ ಸ್ವಾಗತಿಸಿ ಯೋಗ ಶಿಕ್ಷಕರಾದ ವೆಂಕಟರಾಜ ಇವರು ವಂದಿಸಿದರು. ಶ್ರೀಮತಿ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಹಾಗೂ ಶ್ರೀಮತಿ ಧನಲಕ್ಷ್ಮಿ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!