April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ ಮುಂಡತ್ತೊಡಿ ಶಾಲೆಯಲ್ಲಿ ನಡೆಸಲಾಯಿತು.

ಮುಂಡತ್ತೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೇವಂತಿಯವರು ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾಹಿತಿಗಳು ದೊರೆಯುತ್ತಿದ್ದು ಮಲ್ಲಿಗೆ ಕೃಷಿ ಮಾಡೋ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕೇಂದ್ರದ ಸದಸ್ಯರಿಗೆ ಮಲ್ಲಿಗೆ ಗಿಡಗಳನ್ನು ಉಚಿತವಾಗಿ ನೀಡಿ ಮಾಹಿತಿಯನ್ನು ನೀಡಿ ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುತ್ತಿದ್ದು ಗಿಡ ನಾಟಿ ಮಾಡಿ ಬೆಳೆಸಿ ಉತ್ತಮ ಆದಾಯ ಗಳಿಸುವಂತೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾದ ಸಿದ್ದವನ ನರ್ಸರಿಯ ಯೋಜನಾಧಿಕಾರಿ ದಯಾನಂದ ಗಿಡದ ಆಯ್ಕೆ ಮಾಡುವ ಕ್ರಮ ಘೋಷಣೆಯ ಬಗ್ಗೆ ಸ್ಥಳದ ಅವಕಾಶ ಇದ್ದಲ್ಲಿ ನೆಲದಲ್ಲಿ ನಾಟಿ ಮಾಡುವ ಬಗ್ಗೆ ಸ್ಥಳಾವಕಾಶ ಇಲ್ಲದೇ ಇದ್ದಲ್ಲಿ ಗ್ರೋ ಬ್ಯಾಗ್ ನಲ್ಲಿ ಗಿಡವನ್ನು ನಾಟಿ ಮಾಡುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರೇಮಾ ಸ್ವಾಗತಿಸಿ ವಲಯ ಮೇಲ್ವಿಚಾರಕರಾದ ವನಿತಾ ಧನ್ಯವಾದವಿತ್ತರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾವಸಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!