23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ ಮುಂಡತ್ತೊಡಿ ಶಾಲೆಯಲ್ಲಿ ನಡೆಸಲಾಯಿತು.

ಮುಂಡತ್ತೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೇವಂತಿಯವರು ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾಹಿತಿಗಳು ದೊರೆಯುತ್ತಿದ್ದು ಮಲ್ಲಿಗೆ ಕೃಷಿ ಮಾಡೋ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕೇಂದ್ರದ ಸದಸ್ಯರಿಗೆ ಮಲ್ಲಿಗೆ ಗಿಡಗಳನ್ನು ಉಚಿತವಾಗಿ ನೀಡಿ ಮಾಹಿತಿಯನ್ನು ನೀಡಿ ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುತ್ತಿದ್ದು ಗಿಡ ನಾಟಿ ಮಾಡಿ ಬೆಳೆಸಿ ಉತ್ತಮ ಆದಾಯ ಗಳಿಸುವಂತೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾದ ಸಿದ್ದವನ ನರ್ಸರಿಯ ಯೋಜನಾಧಿಕಾರಿ ದಯಾನಂದ ಗಿಡದ ಆಯ್ಕೆ ಮಾಡುವ ಕ್ರಮ ಘೋಷಣೆಯ ಬಗ್ಗೆ ಸ್ಥಳದ ಅವಕಾಶ ಇದ್ದಲ್ಲಿ ನೆಲದಲ್ಲಿ ನಾಟಿ ಮಾಡುವ ಬಗ್ಗೆ ಸ್ಥಳಾವಕಾಶ ಇಲ್ಲದೇ ಇದ್ದಲ್ಲಿ ಗ್ರೋ ಬ್ಯಾಗ್ ನಲ್ಲಿ ಗಿಡವನ್ನು ನಾಟಿ ಮಾಡುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರೇಮಾ ಸ್ವಾಗತಿಸಿ ವಲಯ ಮೇಲ್ವಿಚಾರಕರಾದ ವನಿತಾ ಧನ್ಯವಾದವಿತ್ತರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾವಸಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!