September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

ಬೆಳ್ತಂಗಡಿ : ಭಜನಾ ಪರಿಷತ್ ಬೆಳ್ತಂಗಡಿ, ಕುಣಿತ ಭಜನಾ ತರಬೇತಿದಾರರ ಸಂಘ, ಬೆಳ್ತಂಗಡಿ ತಾ. ವಿವಿಧ ಹಿಂದೂ ಪರ ಸಂಘಟನೆಗಳ & ಭಜಕರ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ ಹಾಗೂ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನ ಬಳಿಯಿಂದ ಖಂಡನಾ ಮೆರವಣಿಗೆ ಮತ್ತು ಬೆಳ್ತಂಗಡಿ ಆಡಳಿತ ಸೌದದ ಆವರಣದಲ್ಲಿ ಭಜಕರ ಸಮಾವೇಶವು ನ.4 ರಂದು ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸುಬ್ರಹ್ಮಣ್ಯ ಅಗರ್ತ, ಧನಂಜಯ ರಾವ್ ಬಿ.ಕೆ, ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ
ಶ್ರೀಮತಿ ಗಿರಿಜ ಭಟ್ ಮಾತನಾಡಿ, ಭಜಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ವೇದಿಕೆಯಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಪಿ ಸಾಲ್ಯಾನ್, ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ ಭಟ್ , ವಿ.ಹಿಂ. ಪರಿಷತ್‌ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ನ.ಪಂ ಅಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಭಾಸ್ಕರ್ ಧಮ೯ಸ್ಥಳ, ಸೀತಾರಾಮ ಬೆಳಾಲ್, ಕೊರಗಪ್ಪ ನಾಯ್ಕ, ಜಯಂತ್ ಗೌಡ, ಮಂಜುನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಪರಿಷತ್ ಉಪಾಧ್ಯಕ್ಷ ಜಯಪ್ರಕಾಶ್ ಕಡಮ್ಮಾಜೆ ಸ್ವಾಗತಿಸಿದರು. ಭಜನಾ ತರಬೇತಿ ಶಿಕ್ಷಕ ಹರೀಶ್ ನೆರಿಯ ಕಾರ್ಯಕ್ರಮ ನಿರೂಪಿಸಿದರು.

ಸಮಾವೇಶಕ್ಕೆ ಮೊದಲು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ತಾಲೂಕು ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ನೂರಾರು ಭಜಕರು ಸಮಾವೇಶದಲ್ಲಿ ಪಾಲ್ಗೊಂಡರು.

Related posts

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!