24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya
error: Content is protected !!