38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya
error: Content is protected !!