25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!