ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!