23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!