July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!