38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya
error: Content is protected !!