September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ನ.3ರಂದು ಮಧ್ಯಾಹ್ನ ಕಂಡು ಬಂದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಹಾಗೂ ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದವು.

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

Related posts

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya
error: Content is protected !!