23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ನ.3ರಂದು ಮಧ್ಯಾಹ್ನ ಕಂಡು ಬಂದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಹಾಗೂ ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದವು.

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

Related posts

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya
error: Content is protected !!