25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ನ.3ರಂದು ಮಧ್ಯಾಹ್ನ ಕಂಡು ಬಂದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಹಾಗೂ ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದವು.

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya
error: Content is protected !!