23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ ಮುಂಡತ್ತೊಡಿ ಶಾಲೆಯಲ್ಲಿ ನಡೆಸಲಾಯಿತು.

ಮುಂಡತ್ತೋಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೇವಂತಿಯವರು ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾಹಿತಿಗಳು ದೊರೆಯುತ್ತಿದ್ದು ಮಲ್ಲಿಗೆ ಕೃಷಿ ಮಾಡೋ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕೇಂದ್ರದ ಸದಸ್ಯರಿಗೆ ಮಲ್ಲಿಗೆ ಗಿಡಗಳನ್ನು ಉಚಿತವಾಗಿ ನೀಡಿ ಮಾಹಿತಿಯನ್ನು ನೀಡಿ ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುತ್ತಿದ್ದು ಗಿಡ ನಾಟಿ ಮಾಡಿ ಬೆಳೆಸಿ ಉತ್ತಮ ಆದಾಯ ಗಳಿಸುವಂತೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾದ ಸಿದ್ದವನ ನರ್ಸರಿಯ ಯೋಜನಾಧಿಕಾರಿ ದಯಾನಂದ ಗಿಡದ ಆಯ್ಕೆ ಮಾಡುವ ಕ್ರಮ ಘೋಷಣೆಯ ಬಗ್ಗೆ ಸ್ಥಳದ ಅವಕಾಶ ಇದ್ದಲ್ಲಿ ನೆಲದಲ್ಲಿ ನಾಟಿ ಮಾಡುವ ಬಗ್ಗೆ ಸ್ಥಳಾವಕಾಶ ಇಲ್ಲದೇ ಇದ್ದಲ್ಲಿ ಗ್ರೋ ಬ್ಯಾಗ್ ನಲ್ಲಿ ಗಿಡವನ್ನು ನಾಟಿ ಮಾಡುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಒಕ್ಕೂಟದ ಅಧ್ಯಕ್ಷೆ ಶೀಲಾವತಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರೇಮಾ ಸ್ವಾಗತಿಸಿ ವಲಯ ಮೇಲ್ವಿಚಾರಕರಾದ ವನಿತಾ ಧನ್ಯವಾದವಿತ್ತರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾವಸಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!