23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!