32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಾ ವಿಶೇಷ ಶಾಲೆಗೆ ನೀಡಿ ಗೌರವಿಸಲಾಯಿತು. ದಯಾ ವಿಶೇಷ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡರು.


ದಯಾ ವಿಶೇಷ ಶಾಲೆಯಲ್ಲಿ 150 ಕ್ಕಿಂತ ಹೆಚ್ಚುಮಕ್ಕಳಿದ್ದು, ವಾಕ್ ಮತ್ತು ಶ್ರವಣ ಚಿಕಿತ್ಸೆ, ಭೌತ ಚಿಕಿತ್ಸೆ, ವೈಧ್ಯಕೀಯ ಚಿಕಿತ್ಸೆ, ನೈರ್ಮಲ್ಯ ತರಬೇತಿ, ಕೌಶಲ್ಯ ತರಬೇತಿ ಮತ್ತು ಪೌಷ್ಟಿಕ ಆಹಾರವನ್ನು ಪ್ರತಿನಿತ್ಯವೂ ಆಡಳಿತ ಮಂಡಳಿಯು ಮಕ್ಕಳಿಗೆ ಉಚಿತವಾಗಿ ಒದಗಿಸುತ್ತಿದ್ದು, ಈ ವಿಶೇಷ ಚೇತನರು ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಾಣುತ್ತಾ ಬಂದಿರುತ್ತಾರೆ. ದಯಾ ವಿಶೇಷ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ವಿವಿಧ ದಾನಿಗಳು ತಮ್ಮ ಸಹಾಯ ಹಸ್ತವನ್ನು ನೀಡಿರುತ್ತಾರೆ. ಅವರ ಈ ಸಹಭಾಗಿತ್ವಕ್ಕೆ ಸಂಸ್ಥೆಯು ಸದಾ ಚಿರಋಣಿಯಾಗಿರುತ್ತದೆ ಎಂದು ಶಾಲಾ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಹಾಗೂ ಸಹ ನಿರ್ದೇಶಕರಾದ ವಂ.ಫಾ.ರೋಹನ್ ಲೋಬೋ ರವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದು. ಈ ಸಂಭ್ರಮದಲ್ಲಿ ಭಾಗಿಯಾದರು.

Related posts

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya
error: Content is protected !!