23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya
error: Content is protected !!