22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya
error: Content is protected !!