24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ನ.3ರಂದು ಮಧ್ಯಾಹ್ನ ಕಂಡು ಬಂದಿದೆ.

ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಹಾಗೂ ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಅ.31 ರಂದು ದಂಪತಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದವು.

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!