25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

ಇತ್ತೀಚೆಗಂತು ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ಸ್ವಲ್ಪ ಜಾಸ್ತಿನೆ ಅನ್ಬಹುದು. ಅದ್ರಲ್ಲೂ ಹೊಸ ಕನಸುಗಳೊಂದಿಗೆ ಕಾಲಿಡುವ ಯುವಕರ ತಂಡ ಪ್ರೇಕ್ಷಕರನ್ನ ತನ್ನತ್ತ ಸೆಳೆಯಲು ನೂತನ ಪ್ರಯತ್ನಗಳನ್ನ ಮಾಡುವಲ್ಲಿ ಶ್ರಮ‌ ಪಡುತ್ತಿದ್ದಾರೆ. ಇದೀಗ ಈ ಸಾಲಿಗೆ ಸೇರ್ಪಡೆಯಾಗಲು ತಂಡವೊಂದು ಸಜ್ಜಾಗಿದ್ದು ದಸ್ಕತ್ ತುಳು ಚಲನಚಿತ್ರದ ಮುಖೇನ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ.

ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ‌ ಮಣ್ಣಿನ‌ ಸೊಗಡಿನೊಂದಿಗೆ, ಕೇಪುಲ ಪಲ್ಕೆಯ ಕಥೆಯನ್ನ ನಮಗೆ ಊಣಬಡಿಸಿ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕಲು ದಸ್ಕತ್ ತಂಡದವರು ತಯಾರಾಗಿದ್ದಾರೆ. ಈಗಾಗಲೇ ಬಹುತೇಕ‌ ಸ್ಯಾಂಡಲ್ ವುಡ್, ಕೋಸ್ಟಲ್ ವುಡ್ ನ ದಿಗ್ಗಜರು ಮತ್ತು ನಾಡಿನ‌ ಜನತೆ ಚಲನಚಿತ್ರದ ಟೀಸರ್ ನೋಡಿ ಮೆಚ್ಚಿಕ್ಕೊಂಡಿದ್ದು ಉತ್ತಮವಾದ ಪ್ರತಿಕ್ರಿಯೆಯನ್ನ ನೀಡಿದ್ದಾರೆ, ಸಿನಿಮಾ ಮೇಕಿಂಗ್, ಸಂಗೀತ ಸಂಯೋಜನೆ, ತುಳುನಾಡಿನ‌ ಸಂಸ್ಕೃತಿ‌ ಮತ್ತು‌ ಪಾತ್ರಗಳಲ್ಲಿನ ನೈಜತೆ ಎಲ್ಲರ ಮನಸ್ಸನ್ನ ಗೆದ್ದಿದ್ದು ಚಲನಚಿತ್ರ ಯಾವಾಗ ಬಿಡುಗಡೆ ಅನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.


ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಹೆಸರಾಂತ ಗಾಯಕ, ಸಂಗೀತ ನಿರ್ದೇಶಕರಾದ ಡಾ।ಗುರುಕಿರಣ್ ಅವರು ಬಿಡುಗಡೆ ದಿನಾಂಕವನ್ನ ಘೋಷಣೆ ಮಾಡಿದ್ದು ಡಿಸೆಂಬರ್ 13 ಕ್ಕೆ ತುಳುನಾಡಿನಾದ್ಯಂತ ದಸ್ಕತ್ ತುಳು ಚಿತ್ರ ತೆರೆ ಮೇಲೆ ಅಬ್ಬರಿಸಲಿದೆ.
ಕೃಷ್ಣ ಜೆ ಪಾಲೆಮಾರ್ ಅರ್ಪಿಸುವ ಈ ಚಿತ್ರವನ್ನ ರಾಘವೇಂದ್ರ ಕುಡ್ವ ನಿರ್ಮಿಸಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಬಹುಮುಖ ಪ್ರತಿಭೆ
ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಆಕ್ಷನ್ ಕಟ್ ಹೇಳಿದ್ದಾರೆ. ಛಾಯಾಗ್ರಹಣದಲ್ಲಿ ಸಂತೋಷ್ ಆಚಾರ್ಯ ಗುಂಪಲಾಜೆ, ಸಂಕಲನ ಗಣೇಶ್ ನೀರ್ಚಾಲ್, ಸಂಗೀತ ಸಂಯೋಜನೆಯಲ್ಲಿ ಸಮರ್ಥನ್ ಎಸ್ ರಾವ್ ಜೊತೆಯಾಗಿದ್ದು, ಸ್ಮಿತೇಶ್ ಬಾರ್ಯ, ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ , ಮನೋಜ್ ಆನಂದ್ , ದೀಕ್ಷಿತ್ ಧರ್ಮಸ್ಥಳ ತಂಡದ ಶಕ್ತಿಯಾಗಿದ್ದಾರೆ.


ಹೊಸ ತಾರಾ ಬಳಗ ಹೊಂದಿರುವ ಚಿತ್ರದಲ್ಲಿ ದೀಕ್ಷಿತ್ ಕೆ ಅಂಡಿಂಜೆ , ನೀರಜ್ ಕುಂಜರ್ಪ ಮೋಹನ್ ಶೇಣಿ ಮಿಥುನ್ ರಾಜ್ , ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ , ನವೀನ್ ಬೋಂದೆಲ್ , ಯೋಗೀಶ್ ಶೆಟ್ಟಿ , ಚೇತನ್ ಪಿಲಾರ್ ,ತಿಮ್ಮಪ್ಪ ಕುಲಾಲ್ ಮುಂತಾದವರು ಬಣ್ಣ ಹಚ್ಚಿದ್ದು ಜನರ ಆಶೀರ್ವಾದಕ್ಕೆ ಕಾಯುತ್ತಿದ್ದಾರೆ.


ಹೊಸ ತಂಡವಾಗಿ ಕಂಡರು ಈಗಾಗಲೇ‌ ವೆಬ್ ಸಿರೀಸ್, ತುಳು, ಕನ್ನಡ ಚಲನಚಿತ್ರಲ್ಲಿ ಕೆಲಸ‌ ಮಾಡಿದ ಅನುಭವ ಇರುವ ದಸ್ಕತ್ ತಂಡ ಹೊಸತನವನ್ನ ನೀಡಿ, ತುಳು ಚಲನಚಿತ್ರ ರಂಗದಲ್ಲೊಂದು ಮೈಲಿಗಲ್ಲು ನಿರ್ಮಿಸಲು ಕಾತುರದಿಂದ ಕಾದಿದ್ದಾರೆ.
ಮಣ್ಣಿನ‌ ಸೊಗಡಿನ ದಸ್ಕತ್ ನಮ್ಮೆಲ್ಲರ ಮನಸ್ಸಲ್ಲಿ ಸಹಿ ಹಾಕುವಲ್ಲಿ ನಾವೆಲ್ಲ ಜೊತೆಗಿರುವ, ತುಳು ಚಲನಚಿತ್ರ ಗೆದ್ದು ದಸ್ಕತ್ ತಂಡ ವಿಜಯಿಯಾಗಿ, ತುಳು ನೆಲದ ಮಹತ್ವ ಊರಿಡೀ ಹರಡಲಿ ಎನ್ನುವ ಹಾರೈಕೆ ನಮ್ಮದು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!