23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!