July 23, 2026
Uncategorized

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ವತಿಯಿಂದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಯು ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ನ.5 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ವರದಿಯನ್ನು ಕೈಬಿಡಬೇಕು ಎಂಬ ಮನವಿ ಹಾಗೂ ಆರು ಹೋರಾಟಗಾರರ ಬೇಡಿಕೆಗಳಾದ ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು. ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ನಡೆಯಬೇಕು. ರೈತರಿಗೆ ಕೋವಿ ಪರವಾನಿಗೆ ನೀಡಬೇಕು. ಪಶ್ಚಿಮಘಟ್ಟಕ್ಕೆ ಸಂಬಂಧಪಟ್ಟಂತೆ ಪರಿಸರ ಸಂರಕ್ಷಣೆಯ ತಜ್ಞರ ವರದಿ ತಯಾರಿಸುವಾಗ ಪಶ್ಚಿಮಘಟ್ಟ ಪ್ರದೇಶದ ಗ್ರಾಮ ಪಂಚಾಯತುಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ವಿಶೇಷ ಗ್ರಾಮಸಭೆ ಕರೆದು ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟಿಸಿ, ಗ್ರಾಮ ಮಟ್ಟದಲ್ಲಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಮಲೆನಾಡು ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ಗ್ರಾಮ ಸಮಿತಿ ಸಂಚಾಲಕ ಕೃಷ್ಣ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎ., ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂ. ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya
error: Content is protected !!