July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

ಬಂದಾರು :ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಇದರ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆಯು ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಶಾಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು.

ಕಾರ್ಯಕ್ರಮವನ್ನು ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ಬೆಂಗಳೂರು ಇವರು ಉದ್ಘಾಟಿಸಿ ಮಾತನಾಡಿ ತನ್ನ ಬಾಲ್ಯದಲ್ಲಿ ಈ ಕ್ರೀಡಾಂಗಣದಲ್ಲಿ ಆಡಿದ ಸವಿನೆನಪುಗಳನ್ನು ನುಡಿದರು ಮತ್ತು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ಧಿವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ಪಾರೊಟ್ಟು ಇವರು ವಹಿಸಿದ್ದರು. ಪೆರ್ಲ -ಬೈಪಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಅನಿತಾಉದಯ ಕುರುಡoಗೆ, ಯುವಕಮಂಡಲದ ಮಾಜಿ ಅಧ್ಯಕ್ಷರಾದ ಲೋಹಿತ್ ಸೊಣಕುಮೇರು, ಕಾರ್ಯದರ್ಶಿ ಸಂಪತ್ ಕರ್ಲೋಡಿ, ಇವರು ಉಪಸ್ಥಿತರಿದ್ದರು,ಸತೀಶ ಬಾಲಂಪಾಡಿ ಇವರು ಸ್ವಾಗತಿಸಿ ವಿಠಲ ಒಳಗುಡ್ಡೆ ಇವರು ಕಾರ್ಯಕ್ರಮ ನಿರೂಪಿಸಿ, ನಿರ್ವಹಿಸಿದರು. ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಯಿತು.
ಕ್ರೀಡಾಕೂಟಕ್ಕೆ ವಿವಿಧ ಗಣ್ಯರು ಆಗಮಿಸಿ ಶುಭ ಹಾರೈಸಿದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya
error: Content is protected !!