25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.5ರಂದು ಮೃತಪಟ್ಟಿದ್ದಾರೆ.

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ ಶ್ರೀಮತಿ ಗ್ರೇಸಿ ಡಿಸೋಜ ದಂಪತಿಯ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು.

ಮನೆಯಿಂದ ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಪ್ರಿಯಾಂಕಾ, ಕೆಲದಿನ ಸಂಬಂಧಿಕರ ಮನೆಯಲ್ಲಿದ್ದು, ನಂತರ ಕೊಕ್ಕಡಕ್ಕೆ ವಾಪಸ್ ಬಸ್ಸಿನಲ್ಲಿ ಬಂದಿದ್ದಳು. ಮದುವೆಯಾಗಬೇಕಿದ್ದ ಯುವಕನಿಗೆ ಕರೆ ಮಾಡಿ, ಮುದ್ದಿಗೆ ಎಂಬಲ್ಲಿಗೆ ತೆರಳಿ ಇಲಿಪಾಷಾಣ ಸೇವಿಸಿ ಹೊಳೆಗೆ ಬಿದ್ದಿದ್ದಳು. ಆಕೆಯ ಕರೆಯಂತೆ ಸ್ಥಳಕ್ಕೆ ತೆರಳಿದ್ದ ಯುವಕ, ಅಸ್ವಸ್ಥಳಾಗಿ ಬಿದ್ದಿದ್ದ ಯುವತಿಯನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ, ಪುತ್ತೂರು, ಕೊನೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ಯುವತಿಯ ಬಗ್ಗೆ ಕೆಲದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ನಡೆಯುತ್ತಿದ್ದು, ಇದರಿಂದ ಯುವತಿ ನೊಂದು ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!