26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ವತಿಯಿಂದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಯು ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ನ.5 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ವರದಿಯನ್ನು ಕೈಬಿಡಬೇಕು ಎಂಬ ಮನವಿ ಹಾಗೂ ಆರು ಹೋರಾಟಗಾರರ ಬೇಡಿಕೆಗಳಾದ ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು. ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ನಡೆಯಬೇಕು. ರೈತರಿಗೆ ಕೋವಿ ಪರವಾನಿಗೆ ನೀಡಬೇಕು. ಪಶ್ಚಿಮಘಟ್ಟಕ್ಕೆ ಸಂಬಂಧಪಟ್ಟಂತೆ ಪರಿಸರ ಸಂರಕ್ಷಣೆಯ ತಜ್ಞರ ವರದಿ ತಯಾರಿಸುವಾಗ ಪಶ್ಚಿಮಘಟ್ಟ ಪ್ರದೇಶದ ಗ್ರಾಮ ಪಂಚಾಯತುಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ವಿಶೇಷ ಗ್ರಾಮಸಭೆ ಕರೆದು ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟಿಸಿ, ಗ್ರಾಮ ಮಟ್ಟದಲ್ಲಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಮಲೆನಾಡು ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ಗ್ರಾಮ ಸಮಿತಿ ಸಂಚಾಲಕ ಕೃಷ್ಣ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎ., ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂ. ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!