April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

ಬಂದಾರು :ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಇದರ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆಯು ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಶಾಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು.

ಕಾರ್ಯಕ್ರಮವನ್ನು ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ಬೆಂಗಳೂರು ಇವರು ಉದ್ಘಾಟಿಸಿ ಮಾತನಾಡಿ ತನ್ನ ಬಾಲ್ಯದಲ್ಲಿ ಈ ಕ್ರೀಡಾಂಗಣದಲ್ಲಿ ಆಡಿದ ಸವಿನೆನಪುಗಳನ್ನು ನುಡಿದರು ಮತ್ತು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ಧಿವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ಪಾರೊಟ್ಟು ಇವರು ವಹಿಸಿದ್ದರು. ಪೆರ್ಲ -ಬೈಪಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಅನಿತಾಉದಯ ಕುರುಡoಗೆ, ಯುವಕಮಂಡಲದ ಮಾಜಿ ಅಧ್ಯಕ್ಷರಾದ ಲೋಹಿತ್ ಸೊಣಕುಮೇರು, ಕಾರ್ಯದರ್ಶಿ ಸಂಪತ್ ಕರ್ಲೋಡಿ, ಇವರು ಉಪಸ್ಥಿತರಿದ್ದರು,ಸತೀಶ ಬಾಲಂಪಾಡಿ ಇವರು ಸ್ವಾಗತಿಸಿ ವಿಠಲ ಒಳಗುಡ್ಡೆ ಇವರು ಕಾರ್ಯಕ್ರಮ ನಿರೂಪಿಸಿ, ನಿರ್ವಹಿಸಿದರು. ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಯಿತು.
ಕ್ರೀಡಾಕೂಟಕ್ಕೆ ವಿವಿಧ ಗಣ್ಯರು ಆಗಮಿಸಿ ಶುಭ ಹಾರೈಸಿದರು.

Related posts

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!