22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.5ರಂದು ಮೃತಪಟ್ಟಿದ್ದಾರೆ.

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ ಶ್ರೀಮತಿ ಗ್ರೇಸಿ ಡಿಸೋಜ ದಂಪತಿಯ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು.

ಮನೆಯಿಂದ ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಪ್ರಿಯಾಂಕಾ, ಕೆಲದಿನ ಸಂಬಂಧಿಕರ ಮನೆಯಲ್ಲಿದ್ದು, ನಂತರ ಕೊಕ್ಕಡಕ್ಕೆ ವಾಪಸ್ ಬಸ್ಸಿನಲ್ಲಿ ಬಂದಿದ್ದಳು. ಮದುವೆಯಾಗಬೇಕಿದ್ದ ಯುವಕನಿಗೆ ಕರೆ ಮಾಡಿ, ಮುದ್ದಿಗೆ ಎಂಬಲ್ಲಿಗೆ ತೆರಳಿ ಇಲಿಪಾಷಾಣ ಸೇವಿಸಿ ಹೊಳೆಗೆ ಬಿದ್ದಿದ್ದಳು. ಆಕೆಯ ಕರೆಯಂತೆ ಸ್ಥಳಕ್ಕೆ ತೆರಳಿದ್ದ ಯುವಕ, ಅಸ್ವಸ್ಥಳಾಗಿ ಬಿದ್ದಿದ್ದ ಯುವತಿಯನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ, ಪುತ್ತೂರು, ಕೊನೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ಯುವತಿಯ ಬಗ್ಗೆ ಕೆಲದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ನಡೆಯುತ್ತಿದ್ದು, ಇದರಿಂದ ಯುವತಿ ನೊಂದು ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya
error: Content is protected !!