24.6 C
ಪುತ್ತೂರು, ಬೆಳ್ತಂಗಡಿ
May 23, 2025
Uncategorized

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ವತಿಯಿಂದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಯು ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ನ.5 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ವರದಿಯನ್ನು ಕೈಬಿಡಬೇಕು ಎಂಬ ಮನವಿ ಹಾಗೂ ಆರು ಹೋರಾಟಗಾರರ ಬೇಡಿಕೆಗಳಾದ ಕಸ್ತೂರಿ ರಂಗನ್ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು. ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ನಡೆಯಬೇಕು. ರೈತರಿಗೆ ಕೋವಿ ಪರವಾನಿಗೆ ನೀಡಬೇಕು. ಪಶ್ಚಿಮಘಟ್ಟಕ್ಕೆ ಸಂಬಂಧಪಟ್ಟಂತೆ ಪರಿಸರ ಸಂರಕ್ಷಣೆಯ ತಜ್ಞರ ವರದಿ ತಯಾರಿಸುವಾಗ ಪಶ್ಚಿಮಘಟ್ಟ ಪ್ರದೇಶದ ಗ್ರಾಮ ಪಂಚಾಯತುಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ವಿಶೇಷ ಗ್ರಾಮಸಭೆ ಕರೆದು ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟಿಸಿ, ಗ್ರಾಮ ಮಟ್ಟದಲ್ಲಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಮಲೆನಾಡು ಹಿತರಕ್ಷಣಾ ವೇದಿಕೆಯ ಚಾರ್ಮಾಡಿ ಗ್ರಾಮ ಸಮಿತಿ ಸಂಚಾಲಕ ಕೃಷ್ಣ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎ., ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂ. ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!