September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ಕ್ಷೇತ್ರಗಳಲ್ಲಿ ಇತಿಹಾಸ ಸೃಷ್ಟಿಸಿದ್ದು, ಅವರ ಯೋಚನೆ ಹಾಗೂ ಯೋಜನೆ ಅಭಿನಂದನೀಯ ಮತ್ತು ಅನುಕರಣೀಯವಾಗಿದೆ. ಪ್ರತೀ ವಿಷಯದಲ್ಲೂ ಅವಕಾಶಗಳನ್ನು ಸಮಾಜಕ್ಕೆ ಅರ್ಪಿಸುವ ಪ್ರಯತ್ನ ಮಾಡುತ್ತಿದ್ದು, ಸಮಾಜದ ಎಲ್ಲಾ ವರ್ಗದ ಜನರನ್ನು ಮೇಲಕ್ಕೆ ತರಲು ಪ್ರಯತ್ನಿಸುವ ಅವರ ಕಾರ್ಯ ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಹೇಳಿದರು.

ಇಲ್ಲಿನ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ನ. 6 ರಂದು ಭಿತ್ತಿಪತ್ರಿಕೆ ಅನಾವರಣಗೊಳಿಸಿ ಮಾತನಾಡಿದ ಅವರು, ಹೆಗ್ಗಡೆ ಅವರು ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಮಹಿಳಾ ಸಶಕ್ತೀಕರಣದ ಭಾಗವಾಗಿ ಮಹಿಳೆಯರಿಗೆ ಕೈಗಾರಿಕಾ ತರಬೇತಿ ಸಂಸ್ಥೆಯನ್ನೂ ಸ್ಥಾಪಿಸಿದ್ದಾರೆ. ಅಷ್ಟೇ ಅಲ್ಲದೆ, ರುಡ್ಸೆಟ್’ನಂಥಹ ಸಂಸ್ಥೆಗಳ ಮೂಲಕ ಸಮಾಜಕ್ಕೆ ಸ್ವದ್ಯೋಗದ ಅವಕಾಶಗಳನ್ನೂ ಸೃಷ್ಟಿಸುತ್ತಿದ್ದಾರೆ ಎಂದು ಅವರು ಶ್ಲಾಘನೆ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿಯರು ಹೊರತಂದಿರುವ ಭಿತ್ತಿಪತ್ರಿಕೆ ಉತ್ತಮವಾಗಿ ಮೂಡಿಬಂದಿದೆ. ಒಂದೊಂದು ಭಿತ್ತಿಪತ್ರಿಕೆಯ ವಿಷಯವೂ ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶ ಹೊಂದಿದ್ದು ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಮಹಿಳೆಯರ ಸಶಕ್ತೀಕರಣಕ್ಕೆ ಎಷ್ಟು ಆದ್ಯತೆ ನೀಡುತ್ತಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅವರು ಬಣ್ಣಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಎಸ್.ಡಿ.ಎಂ. ಕಲಾ ಕೇಂದ್ರದ ಉಪನ್ಯಾಸಕಿ ವಿದುಷಿ ಚೈತ್ರ ಅವರು ಮಾತನಾಡಿ, “ಸಾಧ್ಯವಾದಷ್ಟು ಕಲೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ” ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಉತ್ತಮ ಭಿತ್ತಿಪತ್ರಿಕೆಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಯಿತು. ಇದೇ ಸಂದರ್ಭದಲ್ಲಿ, ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯ ವಿಜೇತರಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಯಿತು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya
error: Content is protected !!