September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!