July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!