22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ನಡ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಡ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ದಿವಾಕರ ಪೂಜಾರಿ, ನಾವೂರು ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ ನಾವೂರು, ನಡ ನಿಕಟಪೂರ್ವಾಧ್ಯಕ್ಷ ವಿಜಯ್ ಗೌಡ, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಜಿತ್ ಅರಿಗ ಧನ್ಯವಾದವಿತ್ತರು. ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!