25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ 8ನೇ ,9 ನೇ ಮತ್ತು 10ನೇ ತರಗತಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.

ಅರ್ಸುಲೈನ್ ಫ್ರಾನ್ಸಿಸ್ಕನ್ ಸಂಸ್ಥೆಯ ವಂ.ಭಗಿನಿ ಡಿಂಪಲ್ ಡಿಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಜೀವನದ ಗುರಿಯನ್ನು ಆಯ್ಕೆ ಮಾಡಬೇಕು. ವೃತ್ತಿ ಎಂದರೇನು ಅದನ್ನು ಆಯ್ಕೆ ಮಾಡುವ ರೀತಿಯನ್ನು ಪ್ರಾಜೆಕ್ಟರ್ ಮೂಲಕ ಮಾಹಿತಿ ನೀಡಿದರು. ನಮ್ಮ ಆಸಕ್ತಿ ವ್ಯಕ್ತಿತ್ವ ಆಧಾರಿತವಾಗಿ ವೃತ್ತಿ ಆಯ್ಕೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಕೇವಲ ಅಂಕಗಳು ಮಾತ್ರವಲ್ಲ ನಮ್ಮ ವಿವಿಧ ಕೌಶಲ್ಯಗಳ ಆಧಾರಿತವಾಗಿ ಆಯ್ಕೆಗೆ ಪ್ರಾಶಸ್ತ್ಯ ನೀಡುತ್ತಾರೆ. 10ನೇ ತರಗತಿಯ ನಂತರ ಏನು? ಯಾವ ಯಾವ ವಿಷಯಗಳನ್ನು ನಾವು ಅಧ್ಯಯನ ಮಾಡಬೇಕು? ಈ ಆಯ್ಕೆ ನಮ್ಮ ಗುರಿಯ ಆಧಾರಿತವಾಗಿ ತಾರ್ಕಿಕ ಚಿಂತನೆಯಿಂದ ಆಯ್ಕೆ ಮಾಡಬೇಕು. ಪರೀಕ್ಷೆಗಳಿಗೆ ಹೇಗೆ ತಯಾರಿ ಮಾಡಬೇಕು? ಎಂಬ ಮಾಹಿತಿ ನೀಡಿದರು. ಯಾವ ವೃತ್ತಿಯೂ ಕೀಳಲ್ಲ, ಅದನ್ನು ನಾನು ಹೇಗೆ ಮಾಡುತ್ತೇನೆ ಅದರ ಮೇಲೆ ಯಶಸ್ಸು ಆಧಾರಿತವಾಗಿದೆ. ಸರಕಾರಿ ಹುದ್ದೆಗಳ ಉದ್ಯೋಗ ಗಿಟ್ಟಿಸುವುದು ಹೇಗೆ ಎಂಬ ಮಾಹಿತಿ ನೀಡಿದರು.

9ನೇ ತರಗತಿಯ ಶಾಝ್ಮ ಕಾರ್ಯಕ್ರಮ ನಿರ್ವಹಿಸಿ, ಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ, ಪ್ರಕಾಶ್ ವಂದನಾರ್ಪಣೆಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ವಂ.ಭಗಿನಿ ಲೀನಾ ಡಿಸೋಜರವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ಅಲಂಕರಿಸಿದರು.

Related posts

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!