22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಗಮಕ ಕಾರ್ಯಕ್ರಮವು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ಕೌರವೇಂದ್ರನ ಕೊಂದೆ ನೀನು ಕಾವ್ಯದ ವಾಚನವನ್ನು ಶ್ರೀಮತಿ ಮೇಧಾ ಮತ್ತು ವ್ಯಾಖ್ಯಾನವನ್ನು ಸುರೇಶ್ ಕುದ್ರಂತಾಯ ಮತ್ತು ರಾಮಕೃಷ್ಣ ಭಟ್ ಬದನಾಜೆಯವರು ಬಹಳ ಮನೋಜ್ಞವಾಗಿ ನಡೆಸಿಕೊಟ್ಟರು. ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಸಾಹಿತ್ಯದ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಶ್ರೀಮತಿ ವಿನುತಾರವರು ಶಾರದಾ ಸ್ತುತಿಯೊಂದಿಗೆ ಆರಂಭಿಸಿದರು. ಶಾಲಾ ಶಿಕ್ಷಕರಾದ ಗಣೇಶ್‌ರವರು ಸ್ವಾಗತಿಸಿ, ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣ್ಯರು ಶಾರದೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿಗಳೊಂದಿಗೆ 95 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಭಾಸಾಪ ಪದಾಧಿಕಾರಿಗಳಾದ ವಿಶ್ವೇಶ್ವರ ಭಟ್ ಉಂಡೆಮನೆ, ಎಮ್.ಗುರುನಾಥ್ ಪ್ರಭು, ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು.


ಶ್ರೀಮತಿ ಆಶಾ ಅಡೂರ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ಧನ್ಯವಾದವನ್ನಿತ್ತರು.

Related posts

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya
error: Content is protected !!