24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya
error: Content is protected !!