23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya
error: Content is protected !!