April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ನಡ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಡ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ದಿವಾಕರ ಪೂಜಾರಿ, ನಾವೂರು ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ ನಾವೂರು, ನಡ ನಿಕಟಪೂರ್ವಾಧ್ಯಕ್ಷ ವಿಜಯ್ ಗೌಡ, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಜಿತ್ ಅರಿಗ ಧನ್ಯವಾದವಿತ್ತರು. ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya
error: Content is protected !!