25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ 8ನೇ ,9 ನೇ ಮತ್ತು 10ನೇ ತರಗತಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.

ಅರ್ಸುಲೈನ್ ಫ್ರಾನ್ಸಿಸ್ಕನ್ ಸಂಸ್ಥೆಯ ವಂ.ಭಗಿನಿ ಡಿಂಪಲ್ ಡಿಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಜೀವನದ ಗುರಿಯನ್ನು ಆಯ್ಕೆ ಮಾಡಬೇಕು. ವೃತ್ತಿ ಎಂದರೇನು ಅದನ್ನು ಆಯ್ಕೆ ಮಾಡುವ ರೀತಿಯನ್ನು ಪ್ರಾಜೆಕ್ಟರ್ ಮೂಲಕ ಮಾಹಿತಿ ನೀಡಿದರು. ನಮ್ಮ ಆಸಕ್ತಿ ವ್ಯಕ್ತಿತ್ವ ಆಧಾರಿತವಾಗಿ ವೃತ್ತಿ ಆಯ್ಕೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಕೇವಲ ಅಂಕಗಳು ಮಾತ್ರವಲ್ಲ ನಮ್ಮ ವಿವಿಧ ಕೌಶಲ್ಯಗಳ ಆಧಾರಿತವಾಗಿ ಆಯ್ಕೆಗೆ ಪ್ರಾಶಸ್ತ್ಯ ನೀಡುತ್ತಾರೆ. 10ನೇ ತರಗತಿಯ ನಂತರ ಏನು? ಯಾವ ಯಾವ ವಿಷಯಗಳನ್ನು ನಾವು ಅಧ್ಯಯನ ಮಾಡಬೇಕು? ಈ ಆಯ್ಕೆ ನಮ್ಮ ಗುರಿಯ ಆಧಾರಿತವಾಗಿ ತಾರ್ಕಿಕ ಚಿಂತನೆಯಿಂದ ಆಯ್ಕೆ ಮಾಡಬೇಕು. ಪರೀಕ್ಷೆಗಳಿಗೆ ಹೇಗೆ ತಯಾರಿ ಮಾಡಬೇಕು? ಎಂಬ ಮಾಹಿತಿ ನೀಡಿದರು. ಯಾವ ವೃತ್ತಿಯೂ ಕೀಳಲ್ಲ, ಅದನ್ನು ನಾನು ಹೇಗೆ ಮಾಡುತ್ತೇನೆ ಅದರ ಮೇಲೆ ಯಶಸ್ಸು ಆಧಾರಿತವಾಗಿದೆ. ಸರಕಾರಿ ಹುದ್ದೆಗಳ ಉದ್ಯೋಗ ಗಿಟ್ಟಿಸುವುದು ಹೇಗೆ ಎಂಬ ಮಾಹಿತಿ ನೀಡಿದರು.

9ನೇ ತರಗತಿಯ ಶಾಝ್ಮ ಕಾರ್ಯಕ್ರಮ ನಿರ್ವಹಿಸಿ, ಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ, ಪ್ರಕಾಶ್ ವಂದನಾರ್ಪಣೆಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ವಂ.ಭಗಿನಿ ಲೀನಾ ಡಿಸೋಜರವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ಅಲಂಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!