24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!