25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!