September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya
error: Content is protected !!