23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ “ ಕನ್ನಡ ಸೇನೆ -ಕರ್ನಾಟಕ” ಬೆಳ್ತಂಗಡಿ ಸಮಿತಿಯಿಂದ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ತಾಲೂಕು ಆಸ್ಪತ್ರೆಯಲ್ಲಿ ಮೂರು ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂದರ್ಶಿಸಿದ ಸಮಿತಿ, ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸೇವೆ ಮತ್ತು ಶುಚಿತ್ವದ ಬಗ್ಗೆ ಎಲ್ಲಾ ಚಿಕಿತ್ಸೆ ಪಡೆಯುವವರಲ್ಲಿ ತೃಪ್ತಿಕರ ಮನೋಭಾವನೆಯನ್ನು ಕಂಡು, ಸಂತಸ ವ್ಯಕ್ತಪಡಿಸಿ ಎಲ್ಲರೂ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಇದೇ ಸಂದರ್ಭದಲ್ಲಿ ಆಂಬುಲೆನ್ಸ್‌ನಲ್ಲಿ ವೃದ್ಧೆಯೊಬ್ಬರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಆಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸೆಗೆ ಅವರನ್ನು ಒಳಪಡಿಸುವ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಿರುವುದು ಕಂಡು ಬಂತು. ವೈದ್ಯರಾದ ಡಾ|ಪ್ರೇಮ್ ಮತ್ತು ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ಕನ್ನಡ ಸೇನೆ ಹಿರಿಯ ಮುಖಂಡ ಇಬ್ರಾಹಿಂ ಮತ್ತು ಶಂಶುದ್ದೀನ್ ಪಣಕಜೆ, ಕೃಷ್ಣ ಮತ್ತು ಎಡ್ವಿನ್ ಮಾಲಾಡಿ, ಅಶ್ರಫ್ ಬಸವನಗುಡಿ ಸಹಕಾರದೊಂದಿಗೆ ಸಮಿತಿ ಪರವಾಗಿ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿಯವರು ಹಣ್ಣು ಹಂಪಲು ವಿತರಿಸಿ ಶುಭಾಶಯ ಕೋರಿದರು.

Related posts

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!