23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ನಡ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಡ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ದಿವಾಕರ ಪೂಜಾರಿ, ನಾವೂರು ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ ನಾವೂರು, ನಡ ನಿಕಟಪೂರ್ವಾಧ್ಯಕ್ಷ ವಿಜಯ್ ಗೌಡ, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಜಿತ್ ಅರಿಗ ಧನ್ಯವಾದವಿತ್ತರು. ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!