22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ನಡ : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಡ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ದಿವಾಕರ ಪೂಜಾರಿ, ನಾವೂರು ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ ನಾವೂರು, ನಡ ನಿಕಟಪೂರ್ವಾಧ್ಯಕ್ಷ ವಿಜಯ್ ಗೌಡ, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಜಿತ್ ಅರಿಗ ಧನ್ಯವಾದವಿತ್ತರು. ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!