23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯೆ ಪವಿತ್ರರವರು ಉದ್ಘಾಟನೆ ಮಾಡಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತಮ ಅವಕಾಶವಿದ್ದು ನಾವು ತರಬೇತಿಗಾಗಿ ಸಮಯ ಮೀಸಲಿಟ್ಟು ಶ್ರದ್ದೆಯಿಂದ ಭಾಗವಹಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಂಚಮಿ ಹಿತಾರ್ಯೂ ಧಾಮ ಆಸ್ಪತ್ರೆಯ ವೈಧ್ಯಾದಿಕಾರಿ ಶ್ರೀಮತಿ ತಾರಾ ರವರು ಮಾತನಾಡುತ್ತಾ ಮಾತೃಶ್ರೀ ಅಮ್ಮನವರು ಎಲ್ಲಾ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುವ ಉದ್ದೇಶದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಅವಕಾಶಗಳನ್ನು ನೀಡುತ್ತಿದ್ದು ಅದಕ್ಕೆ ಪೂರಕವಾಗಿ ನಮ್ಮ ಊರಿನ ಮಹಿಳೆಯರಿಗೆ ಉಚಿತ ತರಬೇತಿ ಪಡೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದು ಉತ್ತಮ ರೀತಿಯಲ್ಲಿ ಭಾಗವಹಿಸುವಂತೆ ತಿಳಿಸಿದರು.

ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ನಡೆಸಲಾಗುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಾ ಹೊಲಿಗೆ ತರಬೇತಿ ಕಾರ್ಯಕ್ರಮ ಈ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು ಟೈಲರಿಂಗ್ ಉದ್ಯಮಕ್ಕೆ ಬಹಳಷ್ಟು ಅವಕಾಶಗಳಿದ್ದು ಸಿರಿ ಸಂಸ್ಥೆಯಲ್ಲಿಯೂ ಉದ್ಯೋಗಾವಕಾಶಗಳಿದ್ದು ಎಲ್ಲರೂ ತರಬೇತಿಗೆ ಸಮಯಕ್ಕೆ ಸರಿಯಾಗಿ ಭಾಗವಹಿಸಿ ಉತ್ತಮ ತರಬೇತಿ ಪಡೆದು ಸ್ವಉದ್ಯೋಗ ಮಾಡುವಂತೆ ತಿಳಿಸಿದರು. ತರಬೇತಿ ಶಿಕ್ಷಕಿ ಸುಶೀಲ ರವರು ತರಬೇತಿ ಬರುವಾಗ ತರಬೇಕಾದ ಪರಿಕರಗಳು ಮತ್ತು ಸಮಯದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾವಸoತ್ ಉಪಸ್ಥಿತರಿದ್ದರು. ಸೇವಪ್ರತಿನಿಧಿ ಕುಸುಮಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಅನಿತಾ ಸ್ವಾಗತಿಸಿ, ರೋಹಿಣಿ ವಂದಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!