37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ವೃತ್ತಿಯ ಬಗ್ಗೆ ಯೋಚಿಸಿ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಹೇಳಿದರು.


ಅವರು ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್, ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ಸಹಭಾಗಿತ್ವದಲ್ಲಿ ವಾಣಿಜ್ಯ ವಿಭಾಗದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ “ಯಶಸ್ಸಿನ ಮಂತ್ರ”ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ಕಾರ್ಯಪ್ರವೃತರಾಗಿ ಉತ್ತಮ ನಾಯಕತ್ವವನ್ನು ಬೆಳೆಸಿಕೊಂಡು ಯಶಸ್ಸಿನ ಜೀವನಕ್ಕೆ ಮುನ್ನಡಿಡಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸಿತರಿದ್ದರು.
ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಮಂಗಳೂರು ಇದರ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ಎನ್ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.


ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಶಾಲಿಕಾ ಪಿ ಆರ್ ಸ್ವಾಗತಿಸಿದರು. ಶ್ರೀಮತಿ ಪವಿತ್ರ ಧನ್ಯವಾದವಿತ್ತರು. ಉಪನ್ಯಾಸಕಿ ಕುಮಾರಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!