23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಮಿತ್ತಬಾಗಿಲು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಿತ್ತಬಾಗಿಲು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು, ಕೃಷಿ ಭೂಮಿಗೂ ಅರಣ್ಯ ಭೂಮಿಯ ನಡುವೆ ಆನೆ ಕಂದಕ ನಿರ್ಮಾಣವಾಗಬೇಕು. ಪಶ್ಚಿಮಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ, ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂಬ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ , ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
error: Content is protected !!