July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ 8ನೇ ,9 ನೇ ಮತ್ತು 10ನೇ ತರಗತಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.

ಅರ್ಸುಲೈನ್ ಫ್ರಾನ್ಸಿಸ್ಕನ್ ಸಂಸ್ಥೆಯ ವಂ.ಭಗಿನಿ ಡಿಂಪಲ್ ಡಿಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಜೀವನದ ಗುರಿಯನ್ನು ಆಯ್ಕೆ ಮಾಡಬೇಕು. ವೃತ್ತಿ ಎಂದರೇನು ಅದನ್ನು ಆಯ್ಕೆ ಮಾಡುವ ರೀತಿಯನ್ನು ಪ್ರಾಜೆಕ್ಟರ್ ಮೂಲಕ ಮಾಹಿತಿ ನೀಡಿದರು. ನಮ್ಮ ಆಸಕ್ತಿ ವ್ಯಕ್ತಿತ್ವ ಆಧಾರಿತವಾಗಿ ವೃತ್ತಿ ಆಯ್ಕೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಕೇವಲ ಅಂಕಗಳು ಮಾತ್ರವಲ್ಲ ನಮ್ಮ ವಿವಿಧ ಕೌಶಲ್ಯಗಳ ಆಧಾರಿತವಾಗಿ ಆಯ್ಕೆಗೆ ಪ್ರಾಶಸ್ತ್ಯ ನೀಡುತ್ತಾರೆ. 10ನೇ ತರಗತಿಯ ನಂತರ ಏನು? ಯಾವ ಯಾವ ವಿಷಯಗಳನ್ನು ನಾವು ಅಧ್ಯಯನ ಮಾಡಬೇಕು? ಈ ಆಯ್ಕೆ ನಮ್ಮ ಗುರಿಯ ಆಧಾರಿತವಾಗಿ ತಾರ್ಕಿಕ ಚಿಂತನೆಯಿಂದ ಆಯ್ಕೆ ಮಾಡಬೇಕು. ಪರೀಕ್ಷೆಗಳಿಗೆ ಹೇಗೆ ತಯಾರಿ ಮಾಡಬೇಕು? ಎಂಬ ಮಾಹಿತಿ ನೀಡಿದರು. ಯಾವ ವೃತ್ತಿಯೂ ಕೀಳಲ್ಲ, ಅದನ್ನು ನಾನು ಹೇಗೆ ಮಾಡುತ್ತೇನೆ ಅದರ ಮೇಲೆ ಯಶಸ್ಸು ಆಧಾರಿತವಾಗಿದೆ. ಸರಕಾರಿ ಹುದ್ದೆಗಳ ಉದ್ಯೋಗ ಗಿಟ್ಟಿಸುವುದು ಹೇಗೆ ಎಂಬ ಮಾಹಿತಿ ನೀಡಿದರು.

9ನೇ ತರಗತಿಯ ಶಾಝ್ಮ ಕಾರ್ಯಕ್ರಮ ನಿರ್ವಹಿಸಿ, ಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ, ಪ್ರಕಾಶ್ ವಂದನಾರ್ಪಣೆಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ವಂ.ಭಗಿನಿ ಲೀನಾ ಡಿಸೋಜರವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ಅಲಂಕರಿಸಿದರು.

Related posts

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya
error: Content is protected !!