23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆಂಜ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಕಳೆಂಜ ಗ್ರಾ. ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ನಿಡ್ಲೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಗೌಡ, ಮಲೆನಾಡು ಹಿತರಕ್ಷಣಾ ಜಿಲ್ಲಾ ಸಮಿತಿ ಸದಸ್ಯ ಸೋಯಿ ಪುದುವೆಟ್ಟು, ವಸಂತ ಕಳೆಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಪ್ರಸನ್ನ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು,. ಗ್ರಾ.ಪಂ. ಸದಸ್ಯ ಹರೀಶ್ ಕೊಯಿಲ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ. ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಎಮ್. ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya
error: Content is protected !!